ಸುರತ್ಕಲ್: ಸಮುದ್ರದಲ್ಲಿ ಮುಳುಗಿ ವಿದ್ಯಾರ್ಥಿನಿ ಮೃತ್ಯು

Update: 2020-01-20 15:57 GMT

ಮಂಗಳೂರು : ಸುರತ್ಕಲ್ ಎನ್.ಐ ಟಿ ಕೆ ಯ ಬೀಚ್ ನಲ್ಲಿ ಆಟವಾಡಲು ತೆರಳಿದ್ದ ವಿದ್ಯಾರ್ಥಿನಿಯೋರ್ವಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಇಬ್ಬರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾದ ಘಟನೆ ನಡೆದಿದೆ.

ಮಧ್ಯಪ್ರದೇಶದ ಸಾಗರ್ ನಿವಾಸಿ, ವಿದ್ಯಾರ್ಥಿನಿ ನಿರ್ಮಲಾ ದಂಗವಾಲ್ (25) ಮೃತರು ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಸುರತ್ಕಲ್ ಎನ್.ಐ .ಟಿ ಕೆ ಯಲ್ಲಿ ನಡೆದಿದ್ದ ಆಲ್ ಇಂಡಿಯಾ ಇ೦ಟರ್ ಎನ್.ಐ.ಟಿ ಸ್ಪೋರ್ಟ್ಸ್ ಮೀಟ್ ಕಾರ್ಯಕ್ರಮದಲ್ಲಿ ದೇಶದ ಬೇರೆ ಬೇರೆ ಎನ್.ಐ ಟಿ ವಿದ್ಯಾರ್ಥಿಗಳು ಆಗಮಿಸಿದ್ದು ಎನ್.ಐ ಟಿ ವಾರಗ೦ಲ್ ನ ತಂಡದ ಸುಮಾರು 23 ವಿದ್ಯಾರ್ಥಿಗಳು ಎನ್.ಐ.ಟಿ ಸ್ಪೋರ್ಟ್ಸ್ ಮೀಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ಕ್ರೀಡಾಕೂಟ ಮುಗಿದ ಬಳಿಕ ವಿದ್ಯಾರ್ಥಿಗಳ ತಂಡವನ್ನು ಎನ್.ಐ ಟಿ ವಾರಗ೦ಲ್ ನ ದೈಹಿಕ ಶಿಕ್ಷಕ ರಾಜು ಒಡೆಲಾ ಅವರು ಬೀಚ್ ಗೆ ಕರೆದುಕೊಂಡು ಹೋಗಿದ್ದು ವಿದ್ಯಾರ್ಥಿಗಳೆಲ್ಲರೂ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭ ನಿರ್ಮಾಲ, ಮೇಘನಾ, ಕನೋಜ್ ಎಂಬವರು ಸಮುದ್ರದ ಅಲೆಗಳ ರಭಸಕ್ಕೆ ಮುಳುಗುತ್ತಿದ್ದು, ಈ ವೇಳೆ ಇತರೆ ವಿದ್ಯಾರ್ಥಿಗಳು ಸಹಾಯಕ್ಕೆ ಕೂಗಿದ್ದು ಸ್ಥಳೀಯ ರಕ್ಷಣಾ ಕಾರ್ಯಕರ್ತರು ಸೇರಿ ಮೂವರು ವಿದ್ಯಾರ್ಥಿನಿಯರನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಈ ಪೈಕಿ ಮೂವರು ವಿದ್ಯಾರ್ಥಿನಿಯರಲ್ಲಿ ನಿರ್ಮಲಾ ದಂಗವಾಲ್ ಅವರನ್ನು ಪರೀಕ್ಷಿಸಿದ  ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News