ಶೃತಿ, ತಾರಾ ನಿಗಮ ಮಂಡಳಿಗೆ ನೇಮಕ ಬಗ್ಗೆ ಸಿಎಂ ಆದೇಶ ಪತ್ರ ವೈರಲ್

Update: 2020-01-20 18:04 GMT

ಬೆಂಗಳೂರು, ಜ. 20: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನಟಿ ಶೃತಿ ಹಾಗೂ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್ ಮಾಜಿ ಸದಸ್ಯೆ, ನಟಿ ತಾರಾ ಅನುರಾಧ ಅವರನ್ನು ನೇಮಕ ಮಾಡಿದ ಸಿಎಂ ಆದೇಶ ಪತ್ರ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

2020ರ ಜ.1ರಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ಸಂಬಂಧ ಆದೇಶ ಹೊರಡಿಸಿ, ಸರಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಆದರೆ, ಈ ಸಂಬಂಧ ಸ್ಪಷ್ಟಣೆ ನೀಡಿರುವ ತಾರಾ ಅನುರಾಧ, ‘ಮಕ್ಕಳ ಹಕ್ಕಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ವಿಚಾರವಾಗಿ ನನಗೆ ಹಲವು ಸಂದೇಶಗಳು ಸಿಗುತ್ತಿವೆ. ಆದರೆ, ಈ ವಿಚಾರ ಸತ್ಯಕ್ಕೆ ದೂರ’ ಎಂದು ಹೇಳಿದ್ದಾರೆ.

ಈ ಹಿಂದೆ ಈ ರೀತಿಯ ಆದೇಶವೊಂದು ಹೊರ ಬಿದ್ದಿತ್ತು. ಆದರೆ, ಅಲ್ಲಿ ಹಿರಿಯ ಅಧಿಕಾರಿಯೊಬ್ಬರು ಕಾರ್ಯನಿರ್ವಹಿಸುತ್ತಿದ್ದು, ನನ್ನ ನೇಮಕಾತಿಯ ಆದೇಶವನ್ನು ರಾಜ್ಯ ಸರಕಾರ ಹಿಂಪಡೆದಿದೆ. ತಾಂತ್ರಿಕ ಕಾರಣಗಳಿಂದ ಈ ಆದೇಶ ರದ್ದಾಗಿದೆ. ಹೀಗಾಗಿ ನಾನು ಯಾವುದೇ ನಿಗಮ ಮಂಡಳಿಯ ಅಧ್ಯಕ್ಷೆ ಸ್ಥಾನಕ್ಕೆ ನೇಮಕವಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News