ಅಪಘಾತದಿಂದ ಗಾಯಗೊಂಡಿದ್ದ ಯುವಕ ಆತ್ಮಹತ್ಯೆ

Update: 2020-01-20 18:29 GMT

ಬೆಂಗಳೂರು, ಜ.20: ಅಪಘಾತದಿಂದಾದ ಗಾಯಗೊಂಡಿದ್ದ ಯುವಕನೊಬ್ಬ ನೋವು ತಾಳಲಾರದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಸುಬ್ರಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗೌಡನಪಾಳ್ಯದ ನವೀನ್(23) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಪೊಲೀಸರು ತಿಳಿಸಿದ್ದಾರೆ.

ಕನಕಪುರ ತಾಲೂಕು ಬೆಟ್ಟದಹಲಸೂರು ಮೂಲದ ನವೀನ್, ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿನ ಮಂಜುನಾಥ್ ಫರ್ನಿಚರ್‌ನಲ್ಲಿ ಕೆಲಸ ಮಾಡುತ್ತಿದ್ದ. ಇತ್ತೀಚೆಗೆ ನಡೆದ ಅಪಘಾತದಲ್ಲಿ ಕಾಲಿಗೆ ಗಂಭೀರವಾದ ಗಾಯವಾಗಿದ್ದರಿಂದ ನವೀನ್ ಮನೆಯಲ್ಲಿಯೇ ಉಳಿದು ಚಿಕಿತ್ಸೆ ಪಡೆದುಕೊಳ್ಳಬೇಕಾಗಿತ್ತು. ಮನೆಯಲ್ಲಿ ಒಂಟಿಯಾಗಿ ಕಳೆಯುವುದು ಹಾಗೂ ಗಾಯದ ನೋವು ತಾಳಲಾರದೆ ನವೀನ್, ರವಿವಾರ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News