ಮಂಗಳೂರಿನಲ್ಲಿ 'ಸ್ಫೋಟಕ' ಪತ್ತೆ: ಕೊಡಗಿನಲ್ಲೂ ಕಟ್ಟೆಚ್ಚರ

Update: 2020-01-20 18:36 GMT

ಮಡಿಕೇರಿ, ಜ.20: ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಸ್ಫೋಟಕ' ಪತ್ತೆಯಾದ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ ಕೊಡಗು ಜಿಲ್ಲೆಯಲ್ಲೂ ಕೂಡ ಕಟ್ಟೆಚ್ಚರ ವಹಿಸಲಾಗಿದೆ. ಕುಶಾಲನಗರದ ಹಾರಂಗಿ ಅಣೆಕಟ್ಟು ವ್ಯಾಪ್ತಿಯಲ್ಲಿ ಕೊಡಗು ಜಿಲ್ಲಾ ಬಾಂಬ್ ನಿಷ್ಕ್ರೀಯ ದಳ ಮತ್ತು ಶ್ವಾನ ದಳ ಶಂಕಿತ ಸ್ಪೋಟಕ ವಸ್ತುಗಳಿಗಾಗಿ ಶೋಧ ಕಾರ್ಯ ನಡೆಸಿತು. 

ಜಲಾಶಯದ ಕ್ರೆಸ್ಟ್ ಗೇಟ್‍ಗಳು, ನಾಲೆಯಲ್ಲೂ ಪರಿಶೀಲನೆ ನಡೆಸಲಾಯಿತು. ಮಡಿಕೇರಿಯ ಕೆಎಸ್‍ಆರ್‍ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣ, ರಾಜಾಸೀಟು ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸಿದರು.

ರಾಜ್ಯ ಆಂತರಿಕ ಭದ್ರತಾ ವಿಭಾಗ, ಸ್ಪೆಷಲ್ ಬ್ರಾಂಚ್, ಗುಪ್ತದಳ ಸಿಬ್ಬಂದಿಗಳು ಕೂಡ ಜಿಲ್ಲೆಯ ಮೇಲೆ ಕಣ್ಣಿಟ್ಟಿದ್ದು, ಮುಂಜಾಗೃತಾ ಕ್ರಮಗಳನ್ನು ಕೂಡ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News