ಮೈಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Update: 2020-01-21 17:11 GMT

ಬೈಂದೂರು, ಜ.21: ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮೈಮೇಲೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.19ರಂದು ಸಂಜೆ ವೇಳೆ ತಗ್ಗರ್ಸೆ ಗ್ರಾಮದ ಸೂರಕೂಂದ ಎಂಬಲ್ಲಿ ನಡೆದಿದೆ.

ಮೃತರನ್ನು ಕಾರವಾರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ ನಿವಾಸಿ ಬೀರಾ ಅಗೇರ ಎಂಬವರ ಮಗ ರವಿ(45) ಎಂದು ಗುರುತಿಸಲಾಗಿದೆ. ಇವರು ಪೆರ್ಡೂರು ಯಕ್ಷಗಾನ ಮೇಳದವರ ಜೊತೆಗೆ ಜನರೇಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು.

ತಗ್ಗರ್ಸೆ ಗ್ರಾಮದ ಸೂರಕೂಂದಲ್ಲಿ ಯಕ್ಷಗಾನ ಮೇಳದೊಂದಿಗೆ ಬಂದವರು, ವೈಯಕ್ತಿಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಡಿಸೇಲ್ ಅನ್ನು ಮೈಗೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರೆನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರು ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News