ಲಾರಿ ಢಿಕ್ಕಿ : ಮಹಿಳೆ ಮೃತ್ಯು

Update: 2020-01-21 17:13 GMT

ಬೈಂದೂರು, ಜ.21: ಶಿರೂರು ಗ್ರಾಪಂ ಕಚೇರಿಯ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಬೆಳಗ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶಿರೂರು ಗ್ರಾಮದ ಕರಾವಳಿ ಆನಂತನ ತೋಪ್ಲು ನಿವಾಸಿ ವೆಂಕಮ್ಮ ಪೂಜಾರ್ತಿ(70) ಎಂದು ಗುರುತಿಸಲಾಗಿದೆ. ಇವರು ಶಿರೂರು ಆಸ್ಪತ್ರೆಗೆ ಹೋಗಲು ರಸ್ತೆಯನ್ನು ದಾಟಲು ನಿಂತುಕೊಂಡಿದ್ದಾಗ ಭಟ್ಕಳ ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ವಿಆರ್‌ಎಲ್ ಲಾರಿಯು ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.

ಇದರಿಂದ ವೆಂಕಮ್ಮ ರಸ್ತೆಗೆ ಬಿದ್ದು ಲಾರಿಯ ಚಕ್ರಕ್ಕೆ ಸಿಕ್ಕಿದರೆನ್ನಲಾಗಿದೆ. ಇದರಿಂದ ತಲೆಗೆ ತೀವ್ರ ಸ್ವರೂಪದ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News