ಜ.24ರಂದು ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಅಭಿಯಾನ ಸಮಾರೋಪ

Update: 2020-01-22 07:22 GMT

ಮಂಗಳೂರು, ಜ.22: ಯುನಿವೆಫ್ ಕರ್ನಾಟಕದ ವತಿಯಿಂದ ಕಳೆದ ನವೆಂಬರ್ 22ರಿಂದ ಆರಂಭಗೊಂಡ ‘ಅರಿಯಿರಿ ಮನುಕುಲದ ಪ್ರವಾದಿಯನ್ನು’ ಎಂಬ ಪ್ರವಾದಿ ಮುಹಮ್ಮದ್ (ಸ)ರವರ ಸಂದೇಶ ಪ್ರಚಾರ ಅಭಿಯಾನ ಜ.24ರಂದು ಸಮಾರೋಪಗೊಳ್ಳಲಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಯುನಿವೆಫ್ ರಾಜ್ಯಾಧ್ಯಕ್ಷ ರಫೀಯುದ್ದೀನ್ ಕುದ್ರೋಳಿ, ‘ಮಾನವ ಸಂಬಂಧಗಳು ಮತ್ತು ಪ್ರವಾದಿ(ಸ)’ ಎಂಬ ಕೇಂದ್ರೀಯ ವಿಷಯದಲ್ಲಿ ಸಮಾರೋಪ ಸಮಾರಂಭ ನಗರದ ಪುರಭವನದಲ್ಲಿ ನಡೆಯಲಿದೆ ಎಂದರು.

ಸಂಜೆ 6:45ಕ್ಕೆ ಆರಂಭಗೊಳ್ಳುವ ಕಾರ್ಯಕ್ರಮದಲ್ಲಿ ವಿಶ್ರಾಂತ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್, ಮಂಗಳೂರು ಕ್ರೈಸ್ತ ಧರ್ಮಪ್ರಾಂತದ ವೈಸಿಎಸ್/ವೈಎಸ್‌ಎಂನ ನಿರ್ದೇಶಕ ಫಾ. ರೂಪೇಶ್ ಮಾಡ್ತಾ, ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ಹೇಳಿದರು.

ಅಭಿಯಾನದ ಅವಧಿಯಲ್ಲಿ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಸೀರತ್ ಸಮಾವೇಶಗಳನ್ನು ಹಮ್ಮಿಕೊಂಡು ಸಾರ್ವಜನಿಕ ಕಾರ್ಯಕ್ರಮಗಳು, ಕಾರ್ನರ್ ಮೀಟಿಂಗ್‌ಗಳು, ಜೀಪ್ ಜಾಥಾ, ಕರಪತ್ರ ಹಾಗೂ ಪುರವಣಿ ವಿತರಣೆಗಳ ಮೂಲಕ ಪ್ರವಾದಿ ಬಗ್ಗೆ ಜಾಗೃತಿಯನ್ನು ಮೂಡಿಸಿದೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಯುನಿವೆಫ್ ಕಾರ್ಯದರ್ಶಿ ಯು.ಕೆ.ಖಾಲಿದ್, ಅಭಿಯಾನದ ಸಂಚಾಲಕ ಅಬ್ದುಲ್ಲಾ ಪಾರೆ, ಸಹ ಸಂಚಾಲಕ ಸಯೀದ್ ಅಹ್ಮದ್, ಸದಸ್ಯ ಕೆ. ಅಬೂಬಕರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News