ಅಜ್ಜಾವರದಲ್ಲಿ ಅಪಘಾತಕ್ಕೀಡಾದ ಬೈಕ್: ಇಬ್ಬರು ಯುವಕರು ಮೃತ್ಯು

Update: 2020-01-22 09:15 GMT

ಸುಳ್ಯ, ಜ.22: ಬೈಕೊಂದು ಅಪಘಾತಕ್ಕೀಡಾಗಿ ರಸ್ತೆಗೆ ಎಸೆಯಲ್ಪಟ್ಟ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ಅಜ್ಜಾವರ ಗ್ರಾಮದ ಮೇನಾಲದಲ್ಲಿ ಇಂದು ಬೆಳಗ್ಗೆ ನಡೆದಿದೆ.

ಮೃತರನ್ನು ಉತ್ತರಪ್ರದೇಶದ ಮುಝಾಫರ್ ನಗರದ ನಿವಾಸಿಗಳಾದ ಡ್ಯಾನಿಶ್ ಮತ್ತು ಅಜ್ಮಲ್ ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರಾಗಿದ್ದ ಇವರಿಬ್ಬರು ಪಳ್ಳತ್ತಡ್ಕದಲ್ಲಿ ಗಾರೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೇನಾಲದಲ್ಲಿ ಇವರ ಬೈಕ್ ನಿಯಂತ್ರಣ ತಪ್ಪಿಸ್ಕಿಡ್ ಆಗಿ ಬಿದ್ದು ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಆದರೆ ಬೈಕಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದೂ ಹೇಳಲಾಗುತ್ತಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News