ಜ.25: ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ
Update: 2020-01-22 15:00 GMT
ಮಂಗಳೂರು, ಜ. 22: ಬಜ್ಪೆ ಸಮೀಪದ ಕೆಂಜಾರಿನಲ್ಲಿರುವ ಶ್ರೀದೇವಿ ತಾಂತ್ರಿಕ ಮಹಾವಿದ್ಯಾಲಯದ ಇಂಜಿನಿಯರಿಂಗ್, ಎಂಬಿಎ, ಎಂಸಿಎ, ಎಂ.ಟೆಕ್ ವಿದ್ಯಾರ್ಥಿಗಳ ಘಟಿಕೋತ್ಸವವು ಜ.25ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.
ಅತಿಥಿಯಾಗಿ ಮಂಗಳೂರು ವಿವಿ ಕುಲಪತಿ ಡಾ.ಪಿ.ಎಸ್.ಎಡಪಡಿತ್ತಾಯ, ಕೆಸಿಸಿಐ ಅಧ್ಯಕ್ಷ ಐಸಾಕ್ ವಾಜ್ ಭಾಗವಹಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಸ್ಥೆಯ ಉಪಾಧ್ಯಕ್ಷ ನಿಧೀಶ್ಎಸ್. ಶೆಟ್ಟಿ, ಕಾರ್ಯದರ್ಶಿ ಮೈನಾ ಎಸ್. ಶೆಟ್ಟಿ, ಟ್ರಸ್ಟಿ ಪ್ರಿಯಾಂಕಾ ಎನ್. ಶೆಟ್ಟಿ ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.