ವಿಷ ಸೇವಿಸಿ ಆತ್ಮಹತ್ಯೆ

Update: 2020-01-22 16:45 GMT

ಶಿರ್ವ, ಜ. 22: ಕಳೆದ ಕೆಲವು ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತಿದ್ದ ಕುರ್ಕಾಲು ಗ್ರಾಮದ ಶಂಕರಪುರದ ಗಿರಿಜಾ ಮೂಲ್ಯ (65) ಎಂಬವರು ಚಿಕಿತ್ಸೆ ಮಾಡಿಸಿದರೂ ಗುಣಮುಖರಾಗದ ಹಿನ್ನೆಲೆಯಲ್ಲಿ ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಬೆಳಗ್ಗೆ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿಸಿದ್ದು, ತಕ್ಷಣ ಚಿಕಿತ್ಸೆಗಾಗಿ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಸೇರಿಸಿದ್ದರೂ ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿರುವುದಾಗಿ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News