ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ: ಆರೋಪಿ ಆದಿತ್ಯ ರಾವ್ ವಿರುದ್ಧ ಮತ್ತೊಂದು ದೂರು ದಾಖಲು

Update: 2020-01-23 05:27 GMT
ಆದಿತ್ಯ ರಾವ್

ಮಂಗಳೂರು: ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಸದ್ಯ ಮಂಗಳೂರು ಪೊಲೀಸರ ವಶದಲ್ಲಿದ್ದು, ಎಸಿಪಿ ಬೆಳ್ಳಿಯಪ್ಪ ನೇತೃತ್ವದ ತಂಡದಿಂದ ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಇದೀಗ ಆರೋಪಿ ಆದಿತ್ಯ ರಾವ್ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಸ್ಫೋಟಕ ಇಟ್ಟ ಬಳಿಕ ಅದೇ ದಿನ ಜ.20ರಂದು ಇಂಡಿಗೋ ವಿಮಾನದಲ್ಲಿ ಬಾಂಬ್ ಇರಿಸಿದ್ದಾಗಿ ಬೆದರಿಕೆ ಕರೆ ಮಾಡಿದ ಹಿನ್ನೆಲೆಯಲ್ಲಿ ಇಂಡಿಗೋ ಅಧಿಕಾರಿಗಳು ಈ ದೂರು ನೀಡಿದ್ದಾರೆ.

ಅಂದು ಮಧ್ಯಾಹ್ನ 3:15ಕ್ಕೆ ತೆರಳಬೇಕಿದ್ದ ವಿಮಾನವನ್ನು ನಿಲ್ದಾಣದ ಅಧಿಕಾರಿಗಳು ನಿಲ್ಲಿಸಿ, ಎಲ್ಲ ಪ್ರಯಾಣಿಕರು ಹಾಗೂ ಲಗೇಜ್‌ಗಳನ್ನು ತಪಾಸಣೆ ನಡೆಸಲಾಗಿತ್ತು. ಬಳಿಕ ವಿಮಾನವು ರಾತ್ರಿ 9:17ಕ್ಕೆ ಬೆಂಗಳೂರು ತೆರಳಿತ್ತು.

ಈ ಹಿನ್ನೆಲೆಯಲ್ಲಿ ಇಂಡಿಗೋ ಅಧಿಕಾರಿಗಳು ಆದಿತ್ಯ ರಾವ್ ವಿರುದ್ಧ ಮಂಗಳೂರಿನ ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News