ಜ. 24: ಪೌರತ್ನ ಕಾಯ್ದೆ ವಿರುದ್ಧ ಪಡುಬಿದ್ರಿಯಲ್ಲಿ ಜನಜಾಗೃತಿ ಸಮಾವೇಶ

Update: 2020-01-23 17:42 GMT

ಪಡುಬಿದ್ರಿ: ಸಂವಿಧಾನ ಸಂರಕ್ಷಣಾ ಸಮಿತಿ ಪಡುಬಿದ್ರಿ ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ಪೌರತ್ವ ಕಾಯ್ದೆ ವಿರುದ್ಧ ಬೃಹತ್ ಜನಜಾಗೃತಿ ಸಮಾವೇಶವು ಕಾರ್ಕಳ ರಸ್ತೆಯ ಗುರುದೇವ್ ಟಾಕೀಸ್ ಬಳಿಯ ಎಫ್‍ಕೆ ಸರ್ವೀಸ್ ಸ್ಟೇಷನ್ ಬಳಿ ಜ. 24ರ  ಮಧ್ಯಾಹ್ನ 2.30ಕ್ಕೆ ನಡೆಯಲಿದೆ.

ಸಮಾವೇಶದಲ್ಲಿ ಸಮಿತಿಯ ಅಧ್ಯಕ್ಷ ಇಸ್ಮಾಯಿಲ್ ಕಂಚಿನಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪಡುಬಿದ್ರಿ ಜುಮ್ಮಾ ಮಸೀದಿ ಖತೀಬ್ ಎಸ್.ಎಂ. ಅಬ್ದುಲ್ ರಹ್ಮಾನ್ ಮದನಿ ಉದ್ಘಾಟಿಸಲಿದ್ದಾರೆ. ನ್ಯಾಯವಾದಿ ಸುಧೀರ್ ಕುಮಾರ್ ಮರೋಳಿ, ಸಿಪಿಎಮ್‍ಎಲ್ ರಾಜ್ಯ ಕಾರ್ಯದರ್ಶಿ ಬಿ. ರುದ್ರಯ್ಯ, ಡಿವೈಎಫ್‍ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ, ಎಸ್‍ಡಿಪಿಐ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಇಬ್ರಾಹಿಂ ಬಾದ್‍ಶಾ ಕೂಡ್ಲಿಪೇಟೆ, ಹಾಫಿಳ್ ಸುಫಿಯಾನ್ ಸಖಾಫಿ ಕಾವಳ್‍ಕಟ್ಟೆ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News