ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ : ಪೊಲೀಸರಿಂದ ವರದಿ ಕೇಳಿದ ರಾಜ್ಯ ಸರಕಾರ

Update: 2020-01-23 18:15 GMT

ಮಂಗಳೂರು:  ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಪ್ರಕರಣ ಸಂಬಂಧಪಟ್ಟಂತೆ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೂಚನೆ ನೀಡಿದೆ.

ಶುಕ್ರವಾರ ಮಧ್ಯಾಹ್ನದ ಒಳಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ವರದಿಯನ್ನು ಕೇಂದ್ರ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಕಳುಹಿಸಲಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ಫೋಟಕ ಘಟನೆಗೆ ಸಂಬಂಧಪಟ್ಟಂತೆ ಹಲವಾರು ಊಹಾಪೋಹಗಳು ಎದ್ದಿದ್ದವು. ಈಗ ಪ್ರಕರಣ ತಿರುವು ಪಡೆದುಕೊಂಡಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ  ಮಧ್ಯಂತರ ವರದಿ ಕೇಳಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News