ಪಾದೂರಿನಲ್ಲಿ ಬೋನಿಗೆ ಬಿದ್ದ ಚಿರತೆ

Update: 2020-01-24 12:12 GMT

ಕಾಪು: ಕಳೆದ ನಾಲ್ಕೈದು ದಿನಗಳಿಂದ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಚಿರತೆ ಕಾಪು ತಾಲೂಕಿನ ಪಾದೂರು ಕೂರಾಲು ಎಂಬಲ್ಲಿ  ಬೋನಿಗೆ ಬಿದ್ದ ಬಿದ್ದ ಘಟನೆ ನಡೆದಿದೆ.

ನಾಲ್ಕೈದು ದಿನಗಳ ಹಿಂದೆ ಈ ಭಾಗದಲ್ಲಿ ಒಂದು ಚಿರತೆ ಓಡಾಡುತ್ತಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿತ್ತು.  ಸ್ಥಳೀಯರ ದೂರಿನ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಮೂರು ದಿವಸಗಳ ಹಿಂದೆ ಚಿರತೆಗಾಗಿ ಬೋನು ಇರಿಸಲಾಗಿತ್ತು. ಈ ಬೋನಿಗೆ ನಿನ್ನೆ ರಾತ್ರಿ ಚಿರತೆ ಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಐದು ವರ್ಷದ ಹೆಣ್ಣು ಚಿರತೆಯನ್ನು ಮೂಕಾಂಬಿಕಾ ಅಭಯಾರಣ್ಯಕ್ಕೆ ಸಾಗಿಸಿದ್ದಾರೆ.

ನಾಲ್ಕು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಒಂದು ಚಿರತೆಯನ್ನು ಹಿಡಿದು ಕಾಡಿಗೆ ಬಿಡಲಾಗಿತ್ತು ಎಂದು ಅರಣ್ಯ ಇಲಾಖೆ ಉಪ ಅರಣ್ಯ  ಅಧಿಕಾರಿ ನಾಗೇಶ್ ಬಿಲ್ಲವ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News