ಹಣಕಾಸು, ಭೂ ವಿವಾದಕ್ಕೆ ಸಂಬಂಧಿಸಿ ಮಹಿಳೆಯ ಮುಖಕ್ಕೆ ಆ್ಯಸಿಡ್ ಎರಚಿದ ಆರೋಪಿ ಸೆರೆ

Update: 2020-01-24 12:20 GMT

ಕಡಬ, ಜ.24. ಹಣಕಾಸು ಹಾಗೂ ಭೂ ವಿವಾದಕ್ಕೆ ಸಂಬಂಧಿಸಿ ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಘಟನೆ ಕಡಬ ಠಾಣೆ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ.

ಆಸಿಡ್ ಎರಚಿದ ಆರೋಪಿಯನ್ನು ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ.

ಕೃಷಿಕ ಜಯಾನಂದ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ (35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಎರಚಿದ್ದಾನೆ ಎನ್ನಲಾಗಿದ್ದು, ಗಾಯಗೊಂಡಿರುವ ತಾಯಿ ಮಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಜಯಾನಂದ ಕೊಠಾರಿಯನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News