ಇಂದೋರ್:ಸರಕಾರದ ವಿರುದ್ಧ ಪ್ರತಿಭಟನೆ; ಮಾಜಿ ಸ್ಪೀಕರ್ ಮಹಾಜನ್ ಪೊಲೀಸ್ ವಶಕ್ಕೆ

Update: 2020-01-24 15:25 GMT

ಇಂದೋರ,ಜ.24: ನಿಷೇಧಾಜ್ಞೆಯನ್ನು ಉಲ್ಲಂಘಿಸಿ ಶುಕ್ರವಾರ ಇಂದೋರ್ ಜಿಲ್ಲಾಧಿಕಾರಿಗಳ ಕಚೇರಿಯೆದುರು ಪ್ರತಿಭಟನೆಯನ್ನು ನಡೆಸಿದ್ದಕ್ಕಾಗಿ ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಮತ್ತು ಮಧ್ಯಪ್ರದೇಶ ಬಿಜೆಪಿ ಅಧ್ಯಕ್ಷ ರಾಕೇಶ್ ಸಿಂಗ್ ಸೇರಿದಂತೆ ಹಲವಾರು ಪ್ರತಿಪಕ್ಷ ನಾಯಕರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

 ಕಮಲನಾಥ್ ಸರಕಾರವು ರಾಜ್ಯದಲ್ಲಿಯ ಭೂಮಾಫಿಯಾದ ವಿರುದ್ಧ ಕೈಗೊಂಡಿರುವ ಅಭಿಯಾನದ ಅಂಗವಾಗಿ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಬಿಜೆಪಿ ನಾಯಕರು ಪ್ರತಿಭಟನೆಯಲ್ಲಿ ತೊಡಗಿದ್ದರು.

ಕಮಲನಾಥ್ ಅವರು ಕಳೆದ ವರ್ಷದ ಡಿಸೆಂಬರ್‌ನಲ್ಲಿ ಈ ಅಭಿಯಾನಕ್ಕೆ ಚಾಲನೆ ನೀಡಿದ್ದು,ಈಗಾಗಲೇ ಇಂದೋರನಲ್ಲಿಯ ಹಲವಾರು ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News