ಉಡುಪಿ: ಜ.25ರಂದು ಸಿಎಎ, ಎನ್‌ಆರ್‌ಸಿ ವಿರುದ್ಧ ಪ್ರತಿಭಟನೆ

Update: 2020-01-24 15:29 GMT

ಉಡುಪಿ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಉಡುಪಿ ಜಿಲ್ಲೆ ಇದರ ವತಿಯಿಂದ ಕೇಂದ್ರ ಸರಕಾರ ಜಾರಿಗೆ ತಂದಿರುವ ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್ ಮಸೂದೆಯ ವಿರುದ್ಧ ಪ್ರತಿಭಟನಾ ಸಭೆಯನ್ನು ಜ.25ರಂದು ಮಧ್ಯಾಹ್ನ 3:30ಕ್ಕೆ ಉಡುಪಿ ಮಿಷನ್ ಕಂಪೌಂಡ್ ಮೈದಾನದಲ್ಲಿ ಆಯೋಜಿಸಲಾಗಿದೆ.

  ಪ್ರತಿಭಟನಾ ಸಭೆಯಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಕೂಡ್ಲಿಪೇಟೆ, ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಬಿ.ಆರ್.ಭಾಸ್ಕರ ಪ್ರಸಾದ್, ಭಾರತೀಯ ಮುಕ್ತಿ ಮೊರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೊ. ವಿಲಾಸ್ ತುಕರಾಮ್, ಪಿಎಫ್‌ಐ ರಾಜ್ಯಾಧ್ಯಕ್ಷ ಮುಹಮ್ಮದ್ ಸಾಖಿಬ್, ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫಾನ್ಸೋ ಫ್ರಾಂಕೋ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಯಾಸೀನ್ ಮಲ್ಪೆ, ಫಾ.ವಿಲಿಯಮ್ ಮಾರ್ಟಿಸ್, ಪತ್ರಕರ್ತ ಶಶಿಧರ ಹೆಮ್ಮಾಡಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News