"ತನ್ನ ಹೇಳಿಕೆಗೆ ಸಾಕ್ಷಾಧಾರ ಒದಗಿಸದಿದ್ದರೆ ಶಾಸಕ ರೇಣುಕಾಚಾರ್ಯ ವಿರುದ್ಧ ಮೊಕದ್ದಮೆ"

Update: 2020-01-24 16:40 GMT

ಬಾಗಲಕೋಟೆ, ಜ. 24: ‘ಮಸೀದಿಗಳಲ್ಲಿ ಮದ್ದು-ಗುಂಡು ಸಂಗ್ರಹಿಸಲಾಗಿದೆ’ ಎಂಬ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ತನ್ನ ಹೇಳಿಕೆಗೆ ಒಂದು ವಾರದಲ್ಲಿ ಸೂಕ್ತ ಸಾಕ್ಷಾಧಾರ ಒದಗಿಸದಿದ್ದರೆ, ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಘಟಕ ಎಸ್.ಜಿ. ನಂಜಯ್ಯನಮಠ ಎಚ್ಚರಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ದು- ಗುಂಡುಗಳನ್ನು ಯಾವ ಮಸೀದಿ ಸಂಗ್ರಹಿಸಲಾಗಿದೆ ಎಂಬುದನ್ನು ಬಹಿರಂಗಪಡಿಸಿ. ಇಲ್ಲದೆ ಇದ್ದರೆ ಕಾನೂನು ಕ್ರಮವನ್ನು ಎದುರಿಸಬೇಕೆಂದು ಇದೇ ವೇಳೆ ತಿರುಗೇಟು ನೀಡಿದರು.

ಮಸೀದಿಯಲ್ಲಿ ಮದ್ದುಗುಂಡು ಸಂಗ್ರಹಿಸಿಡುವ ವಿಚಾರ ಬಹಳ ಗಂಭೀರವಾದದ್ದು, ಅದರ ಬಗ್ಗೆ ಶಾಸಕ ರೇಣುಕಾಚಾರ್ಯ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಿ. ಕೇಂದ್ರ ಹಾಗೂ ರಾಜ್ಯದಲ್ಲಿ ಅವರದ್ದೇ ಸರಕಾರ ಇರುವುದರಿಂದ ತನಿಖೆಯೂ ನಡೆಯಲಿ ಎಂದು ಅವರು ಆಗ್ರಹಿಸಿದರು.

ಇಲ್ಲದೆ ಇದ್ದರೆ ಮನಸೋ ಇಚ್ಛೆ, ಉಡಾಫೆ ಹೇಳಿಕೆ ನೀಡಿದ್ದೇನೆ ಎಂದು ಶಾಸಕ ರೇಣುಕಾಚಾರ್ಯ, ಕೂಡಲೇ ರಾಜ್ಯದ ಜನರ ಕ್ಷಮೆ ಯಾಚಿಸಲಿ. ಇಲ್ಲದಿದ್ದರೆ ಅವರ ವಿರುದ್ಧ ಬಾಗಲಕೋಟೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News