ಪಕ್ಕಲಡ್ಕದಲ್ಲಿ ಸಿಎಎ ವಿರುದ್ಧ ಪ್ರತಿಭಟನೆ

Update: 2020-01-24 17:41 GMT

ಮಂಗಳೂರು, ಜ.24: ಮುಹಿಯುದ್ದೀನ್ ಜುಮ್ಮಾ ಮಸೀದಿ ಪಕ್ಕಲಡ್ಕ ಮತ್ತು ಪಕ್ಕಲಡ್ಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಶುಕ್ರವಾರ ಮಧ್ಯಾಹ್ನ ಮಸೀದಿ ವಠಾರದಲ್ಲಿ ಸಿ ಎಎ ಮತ್ತು ಎನ್‌ಆರ್‌ಸಿ, ಎನ್‌ಪಿಆರ್ ವಿರುದ್ಧ ಪ್ರತಿಭಟನೆ ನಡೆಯಿತು.

ಸ್ಥಳೀಯ ಮಸೀದಿಯ ಖತೀಬ್ ಸಲಾಂ ಫೈಝಿ ಇರ್ಫಾನಿ ಉದ್ಘಾಟನಾ ಭಾಷಣ ನೆರವೇರಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಕುಮಾರ್ ಬಜಾಲ್ ಆಗಮಿಸಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ನಂತರ ಪಕ್ಕಲಡ್ಕ ಮುಸ್ಲಿಂ ಸಂಘಟನೆಗಳ ಒಕ್ಕೂಟದ ಉಪಾಧ್ಯಕ್ಷ ಯೂಸುಫ್‌ಸಾಬ್ ಹಾಗೂ ಸದಸ್ಯ ಬಶೀರ್ ಪಕ್ಕಲಡ್ಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯ ಅಧ್ಯಕ್ಷತೆಯನ್ನು ಮುಹಮ್ಮದ್ ಬಾವ ವಹಿಸಿದ್ದರು. ಪಕ್ಕಲಡ್ಕ ಜಮಾಅತ್‌ನ ಅಧ್ಯಕ್ಷ ಹಾಜಿ ಅಬೂಬಕರ್ ಕೆಎಂಪಿ ಹಾಗೂ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಉಪಸ್ಥಿತರಿದ್ದರು. ಹಬೀಬ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News