ಜ.26: ಕೃಷ್ಣಾಪುರದಲ್ಲಿ ರಕ್ತದಾನ ಶಿಬಿರ

Update: 2020-01-24 17:52 GMT

ಮಂಗಳೂರು, ಜ.24: ಜಮಾಅತೆ ಇಸ್ಲಾಮಿ ಹಿಂದ್ ಕೃಷ್ಣಾಪುರ ಹಾಗೂ ಹ್ಯುಮೇನಿಟೇರಿಯನ್ ರಿಲೀಫ್ ಸೊಸೈಟಿ ಮಂಗಳೂರು ಇದರ ವತಿಯಿಂದ ಗಣರಾಜ್ಯೋತ್ಸವ ಪ್ರಯುಕ್ತ ಜ.26ರಂದು ಬೆಳಗ್ಗೆ 9:30ರಿಂದ ಮಧ್ಯಾಹ್ನ 1ಗಂಟೆಯವರೆಗೆ ಕೃಷ್ಣಾಪುರ 6ನೆ ಬ್ಲಾಕ್ ಬಳಿಯ ಲಾಲ್ ಬಹಾದ್ದೂರ್ ಶಾಸ್ತ್ರಿ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.

ಮಹಿಳೆಯರಿಗೂ ರಕ್ತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News