ಬಹುಮಹಡಿ ಕಟ್ಟಡಕ್ಕೆ ನುಗ್ಗಿದ ಲಾರಿ: ಚಾಲಕ ಮೃತ್ಯು

Update: 2020-01-24 18:45 GMT

ಬೆಂಗಳೂರು, ಜ.24: ಲಾರಿಯೊಂದು ನಿಯಂತ್ರಣ ತಪ್ಪಿ ಬಹುಮಹಡಿ ಕಟ್ಟಡಕ್ಕೆ ನುಗ್ಗಿದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಇಲ್ಲಿನ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶುಕ್ರವಾರ ಮುಂಜಾನೆ ಈ ಘಟನೆ ನಡೆದಿದ್ದು, ಹೆಗಡೆ ನಗರದ ತೇಜಸ್(28) ಮೃತ ಚಾಲಕ ಎಂದು ಪೊಲೀಸರು ಗುರುತಿಸಿದ್ದಾರೆ. ಲಾರಿಯೊಂದರಲ್ಲಿ ಮಣ್ಣು ತುಂಬಿಕೊಂಡು, ಇಲ್ಲಿನ ಲಕ್ಷ್ಮೀಪುರ ಕ್ರಾಸ್ ಬಳಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ವಿದ್ಯಾರಣ್ಯಪುರದ ಮುಖ್ಯರಸ್ತೆಯ ಬೊಮ್ಮಸಂದ್ರದಲ್ಲಿನ ಬಹುಮಹಡಿ ಕಟ್ಟಡಕ್ಕೆ ನುಗ್ಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಬಹುಮಹಡಿ ಕಟ್ಟಡಕ್ಕೆ ನುಗ್ಗಿದ ಲಾರಿ: ಚಾಲಕ ಮೃತ್ಯು

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಯಲಹಂಕ ಸಂಚಾರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News