ಮರ್ಧಾಳ: ಹೊಟೇಲ್ ಉದ್ಯಮಿ ಆತ್ಮಹತ್ಯೆ
Update: 2020-01-25 04:32 GMT
ಕಡಬ, ಜ.25: ಕಳೆದ ಕೆಲವು ದಶಕಗಳಿಂದ ಕಡಬ ತಾಲೂಕಿನ ಮರ್ಧಾಳದಲ್ಲಿ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದ ಸಾಂತಪ್ಪ ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ತಡರಾತ್ರಿ ಬೆಳಕಿಗೆ ಬಂದಿದೆ.
ಹೊಟೇಲ್ ಸಾಂತಪ್ಪ ಎಂದೇ ಚಿರಪರಿಚಿತರಾಗಿದ್ದ ಸಾಂತಪ್ಪ ಶುಕ್ರವಾರ ಸಂಜೆ ಐತ್ತೂರು ಗ್ರಾಮದ ಭ್ರಾಂತಿಕಟ್ಟೆ ಎಂಬಲ್ಲಿ ಅರಣ್ಯ ಇಲಾಖೆಯ ಜಮೀನಿನಲ್ಲಿ ವಿಷ ಸೇವಿಸಿದ್ದಾರೆ ಎನ್ನಲಾಗಿದೆ. ತಡರಾತ್ರಿ ವೇಳೆ ಮೃತದೇಹ ಕಂಡುಬಂದಿದ್ದು, ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ