ದೇಶದ ಅಭಿವೃದ್ಧಿಗೆ ಮತದಾರರ ಸಹಭಾಗಿತ್ವ ಅಗತ್ಯ: ಸಿ.ಎಂ.ಜೋಷಿ

Update: 2020-01-25 14:44 GMT

ಉಡುಪಿ ಜ.25: ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, 18 ವರ್ಷ ತುಂಬಿದ ಎಲ್ಲಾ ಮತದಾರರು ಚುನಾ ವಣೆಗಳಲ್ಲಿ ಮತದಾನ ಮಾಡಬೇಕು ಎಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ.ಜೋಷಿ ಹೇಳಿದ್ದಾರೆ.

ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಶನಿವಾರ ಉಡುಪಿ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

 ಜಗತ್ತಿನ ಅತೀದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದಲ್ಲಿ, 18 ವರ್ಷದ ತುಂಬಿದ ಎಲ್ಲಾ ಪ್ರಜೆಗಳಿಗೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ಚಲಾಯಿಸಬೇಕು. ಯುವ ಜನತೆ ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಂಡು ಜಾಗೃತ ಮತದಾರರಾಗಬೇಕು. ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ದೇಶದ ಏಳಿಗೆಯಲ್ಲಿ ಸಹ ಭಾಗಿಗಳಾಗಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಕಾವೇರಿ ಮಾತನಾಡಿ, ಲಿಂಗ , ಧರ್ಮ ಸೇರಿದಂತೆ ಯಾವುದೇ ಬೇಧವಿಲ್ಲದೇ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದೆ.ವ್ಯವಸ್ಥೆಯ ಬಗ್ಗೆ ದೂಷಿಸದೇ ಅದರಲ್ಲಿ ಬದಲಾವಣೆ ತರಲು ಮತದಾನ ಮಾಡಬೇಕು.ವಿದ್ಯಾವಂತ ಜನತೆ ಮತದಾನ ಪ್ರಕ್ರಿಯೆಯಲ್ಲಿ ಹಿಂದುಳಿ ಯುತಿದ್ದು, ಪ್ರಜಾಪ್ರುತ್ವದ ಯಶಸ್ಸಿಗೆ ಎಲ್ಲಾ ಮತದಾರರು ಮತದಾನ ಮಾಡಬೇಕು ಎಂದರು.

ಅಧ್ಯಕ್ಷತೆಯನ್ನು ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋಟ್ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಸದಾಶಿವ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಮೊದಲ ಬಾರಿ ಮತದಾರರಾಗಿ ನೊಂದಣಿ ಯಾದವರಿಗೆ ಎಪಿಕ್ ಕಾರ್ಡ್ ವಿತರಿಸಲಾಯಿತು.

2019 ಲೋಕಸಭಾ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವ ಹಿಸಿದ ಬಿಎಲ್‌ಓಗಳಾದ ಅನುಸೂಯಾ, ಗೋಪಾಲ್ ಮತ್ತು ಉಮಾವತಿ ಅವರನ್ನು ಸನ್ಮಾನಿಸಲಾಯಿತು. ಆಲೂರು ಪ್ರೌಢಶಾಲೆ, ಬ್ರಹ್ಮಾವರ ಪಿಯು ಕಾಲೇಜು, ಲಕ್ಷ್ಮಿ ಸೋಮ ಬಂಗೇರಾ ಪ್ರ.ದ.ಕಾಲೇಜು ಕೋಟ ಪಡುಕರೆ, ಸರಕಾರಿ ಪಾಲಿಟೆಕ್ನಿಕ್ ಉಡುಪಿ, ಕೆಎಂಸಿ ಮಣಿಪಾಲ ಕಾಲೇಜುಗಳನ್ನು ಉತ್ತಮ ಎಲೆಕ್ಟ್ರೋರಲ್ ಕ್ಲಬ್‌ಗಳಾಗಿ ಸನ್ಮಾನಿಸಲಾಯಿತು. ಪಡುಕೆರೆ ಲಕ್ಷ್ಮಿ ಸೋಮ ಬಂಗೇರಾ ಕಾಲೇಜಿನ ವಿದ್ಯಾರ್ಥಿನಿ ಹರ್ಷಲ್ ರಾವ್ ಅವರಿಗೆ ಉತ್ತಮ ಕ್ಯಾಂಪಸ್ ಅಂಬಾಸಿಡರ್ ಪ್ರಶಸ್ತಿ ನೀಡಲಾಯಿತು.

ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಕೋಲಾಜ್ ತಯಾ ರಿಕೆ, ಪೋಸ್ಟರ್ ತಯಾರಿಕೆ, ರಸಪ್ರಶ್ನೆ, ಪ್ರಬಂಧ ಮತ್ತು ನಾಟಕ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಹೆಚ್ಚುವರಿ ಎಸ್ಪಿ ಕುಮಾರ ಚಂದ್ರ, ಪೌರಾಯುಕ್ತ ಆನಂದ್ ಕಲ್ಲೋಳಿಕರ್, ಡಾ.ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ, ಜಿಲ್ಲಾ ಚುನಾವಣಾ ತಹಸೀಲ್ದಾರ್ ಆನಂದಪ್ಪನಾಯಕ್ ಉಪಸ್ಥಿತರಿದ್ದರು. ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್ ಸ್ವಾಗತಿಸಿ ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News