ಪದ್ಮಶ್ರೀ ಗೌರವಕ್ಕೆ ಪಾತ್ರರಾದ ತುಳಸಿ ಗೌಡ, ಹರೇಕಳ ಹಾಜಬ್ಬರಿಗೆ ಮುಖ್ಯಮಂತ್ರಿ ಅಭಿನಂದನೆ
Update: 2020-01-25 15:40 GMT
ಬೆಂಗಳೂರು, ಜ.25: ದೇಶದ ನಾಲ್ಕನೆ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾದ ಕಿತ್ತಳೆ ವ್ಯಾಪಾರಿ 'ಅಕ್ಷರ ಸಂತ' ಹರೇಕಳ ಹಾಜಬ್ಬ ಹಾಗೂ ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಪ್ರಶಸ್ತಿಗೆ ಆಯ್ಕೆಯಾದ ತುಳಸಿ ಗೌಡ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದಿಸಿದ್ದಾರೆ.
'ಹಾಜಬ್ಬ ಅವರು ಶಿಕ್ಷಣ ಕ್ಷೇತ್ರ ಮತ್ತು ತುಳಸಿ ಗೌಡ ಅವರು ಪರಿಸರ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಲಾಗಿದ್ದು. ಈ ಪ್ರಶಸ್ತಿಗಳು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಇತರರಿಗೂ ಪ್ರೇರಣೆಯಾಗಲಿ ಎಂದು ಆಶಿಸುವುದಾಗಿ ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.