ಜ. 27: ಪೌರತ್ವ ತಿದ್ದುಪಡಿ ಮಾಹಿತಿ ಸಮಾವೇಶಕ್ಕೆರಾಜನಾಥ್ ಸಿಂಗ್

Update: 2020-01-25 15:51 GMT

ಮಂಗಳೂರು, ಜ.25: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಂಗಳೂರಿನ ಬಂಗ್ರಕೂಳೂರು ಗೋಲ್ಡ್ ಪಿಂಚ್ ಮೈದಾನದಲ್ಲಿ ಜ.27ರಂದು ನಡೆಯಲಿರುವ ಜನಜಾಗೃತಿ ಸಮಾವೇಶದಲ್ಲಿ ಭಾಗವಹಿಸಲು ಕೇಂದ್ರ ಸಚಿವ ರಾಜನಾಥ್ ಸಿಂಗ್ ಮಂಗಳೂರಿಗೆ ಆಗಮಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ  ಸುದರ್ಶನ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಕೇಂದ್ರದ ಸೂಚನೆಯಂತೆ ಮಂಗಳೂರು ಸೇರಿ ರಾಜ್ಯದ ಮೂರು ಕಡೆ ಪೌರತ್ವ ಕಾಯ್ದೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರ್ಯಕ್ರಮದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರು  ಭಾಗವಹಿಸುವ ನಿರೀಕ್ಷೆ ಇದೆ. ಪ್ರತಿ ಬೂತ್ ಮಟ್ಟದಿಂದ ಕನಿಷ್ಠ ನೂರು ಮಂದಿ ಭಾಗವಹಿಸಲಿದ್ದಾರೆ ಎಂದು ಸುದರ್ಶನ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಬಿಜೆಪಿ ಮುಖಂಡ ರಾದ ರವಿಶಂಕರ್ ಮಿಜಾರ್, ಜಗದೀಶ್ ಶೇಣವ, ಮೋನಪ್ಪ ಭಂಡಾರಿ, ನಿತಿನ್ ಕುಮಾರ್, ಕಿಶೋರ್ ರೈ, ರೋಹಿತ್ ಅಮೀನ್, ಸಂಜಯ ಪ್ರಭು ಮೊದಲಾದ ವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News