ಭಾರತ ಏಶ್ಯಕಪ್ ಬಹಿಷ್ಕರಿಸಿದರೆ ನಾವು ವಿಶ್ವಕಪ್‌ನಲ್ಲಿ ಆಡುವುದಿಲ್ಲ: ಪಿಸಿಬಿ

Update: 2020-01-25 17:24 GMT

ಕರಾಚಿ, ಜ.25: ಈ ವರ್ಷದ ಸೆಪ್ಟಂಬರ್‌ನಲ್ಲಿ ಪಾಕಿಸ್ತಾನದಲ್ಲಿ ನಡೆಯಲಿರುವ ಏಶ್ಯಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಗೆ ಬಿಸಿಸಿಐ ತನ್ನ ತಂಡವನ್ನು ಕಳುಹಿಸದೇ ಇದ್ದರೆ, 2021ರಲ್ಲಿ ಭಾರತದಲ್ಲಿ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್‌ಗೆ ನಮ್ಮ ತಂಡವನ್ನು ಭಾರತಕ್ಕೆ ಕಳುಹಿಸಿಕೊಡುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ(ಪಿಸಿಬಿ)ಕಾರ್ಯನಿರ್ವಾಹಕ ಅಧಿಕಾರಿ ವಸೀಂ ಖಾನ್ ಶನಿವಾರ ತಿಳಿಸಿದ್ದಾರೆ.

ಒಂದು ವೇಳೆ ಭಾರತ ಏಶ್ಯಕಪ್ ಆಡಲು ಪಾಕ್‌ಗೆ ಬಾರದೇ ಇದ್ದರೆ ನಾವು 2021ರ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಭಾಗವಹಿಸಲು ನಿರಾಕರಿಸುತ್ತೇವೆ ಎಂದು ಸುದ್ದಿಗಾರರಿಗೆ ಖಾನ್ ತಿಳಿಸಿದರು.

ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸಿಕೊಡುತ್ತಿರುವುದಕ್ಕೆ ಪ್ರತಿಯಾಗಿ ಬಾಂಗ್ಲಾಕ್ಕೆ ಏಶ್ಯಕಪ್ ಆತಿಥ್ಯವನ್ನು ಪಾಕಿಸ್ತಾನ ಬಿಟ್ಟುಕೊಡಲಿದೆ ಎಂಬ ವರದಿಯನ್ನು ಪಿಸಿಬಿಯ ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News