ಜೆಡಿಎಸ್ ನನಗೆ ಅನ್ಯಾಯ ಮಾಡಲ್ಲ: ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು

Update: 2020-01-25 18:36 GMT

ಬೆಂಗಳೂರು, ಜ.25: ಜೂನ್ ತಿಂಗಳಲ್ಲಿ ನಡೆಯುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಒಬ್ಬ ಆಕಾಂಕ್ಷಿಯಾಗಿದ್ದು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಜೆಡಿಎಸ್‌ನಲ್ಲಿ ನನಗೆ ಅವಕಾಶ ಸಿಗುವ ನಂಬಿಕೆ ಇದೆ. ಈಗಲೂ ಪಕ್ಷದಲ್ಲಿ ಸಕ್ರಿಯವಾಗಿದ್ದು ದೇವೇಗೌಡರು ವಹಿಸಿರುವ ಜವಾಬ್ದಾರಿಗೆ ಅನುಗುಣವಾಗಿ ಪಕ್ಷದ ಕೆಲಸ ಮಾಡುತ್ತಿದ್ದೇನೆ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್ ಬಾಬು ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ಕೆಲವು ಮಾಧ್ಯಮಗಳಲ್ಲಿ ನಾನು ಬೇರೆ ಪಕ್ಷದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧೆ ಮಾಡುವುದಾಗಿ ವರದಿಯಾಗಿದೆ. ಪ್ರಸ್ತುತ ನಾನು ಜೆಡಿಎಸ್ ಪಕ್ಷದಲ್ಲಿದ್ದು ಬೇರೆ ಪಕ್ಷ ಸೇರುವ ಪ್ರಶ್ನೆ ಇರುವುದಿಲ್ಲ. ಕೆಲವು ಪತ್ರಿಕೆಗಳಲ್ಲಿ ಬಂದಿರುವ ಮಾಹಿತಿ ಅಪೂರ್ಣವಾಗಿದೆ ಎಂದು ಅವರು ಹೇಳಿದ್ದಾರೆ.

ಜೆಡಿಎಸ್‌ನಲ್ಲಿ ಅವಕಾಶ ನೀಡದೆ ಹೋದರೆ ನಂತರ ಈ ಕ್ಷೇತ್ರದ ಮತದಾರರು ಮತ್ತು ಶಿಕ್ಷಕರ ಅಭಿಪ್ರಾಯ ಪಡೆದು ಮುಂದಿನ ರಾಜಕೀಯ ತೀರ್ಮಾನ ಕೈಗೊಳ್ಳಲಾಗುವುದು. ಈ ತೀರ್ಮಾನವನ್ನೂ ಕೆಲವೇ ದಿನಗಳಲ್ಲಿ ತೆಗೆದುಕೊಳ್ಳಲಿದ್ದೇನೆ. ಪಕ್ಷದಲ್ಲಿ 40 ವರ್ಷಗಳಿಂದ ನಿರಂತರ ಕೆಲಸ ಮಾಡಿಕೊಂಡು ಬಂದಿದ್ದು, ನಮ್ಮ ನಾಯಕರು ನನಗೆ ಅನ್ಯಾಯ ಮಾಡುವುದಿಲ್ಲ ಎಂಬ ನಂಬಿಕೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News