ಎಸ್‍ಡಿಪಿಐಯಿಂದ ಮಡಿಕೇರಿಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2020-01-26 12:30 GMT

ಮಡಿಕೇರಿ ಜ.26 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಕೊಡಗು ಜಿಲ್ಲಾ ಘಟಕದ ವತಿಯಿಂದ 71ನೇ ಗಣರಾಜ್ಯೋತ್ಸವವನ್ನು ಮಡಿಕೇರಿಯ ಕೇಂದ್ರ ಕಚೇರಿಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಸ್‍ಡಿಪಿಐ ಜಿಲ್ಲಾಧ್ಯಕ್ಷ ಟಿ.ಹೆಚ್.ಅಬೂಬಕ್ಕರ್ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಭದ್ರ ಪಡಿಸುವ ಕಾರ್ಯಕ್ಕೆ ಎಲ್ಲರೂ ಒಗ್ಗಟ್ಟನ್ನು ಪ್ರದರ್ಶಿಸಬೇಕೆಂದರು. ಎಸ್‍ಡಿಪಿಐ ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಅಡ್ಕಾರ್, ಉಪಾಧ್ಯಕ್ಷ ಕೆ.ಜಿ.ಪೀಟರ್, ನಗರಾಧ್ಯಕ್ಷ ಮನ್ಸೂರ್, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಅಮೀನ್ ಮೊಹಿಸಿನ್ ಮತ್ತಿತರರು ಹಾಜರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಅರ್ಪಿಸಿದರು.

ನಗರದ ಹಿಲ್‍ರಸ್ತೆ ಬಡಾವಣೆ, ತ್ಯಾಗರಾಜ ಕಲೋನಿ ಹಾಗೂ ಅಜಾದ್ ನಗರದಲ್ಲೂ ಎಸ್‍ಡಿಪಿಐ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News