ಮಂಗಳೂರು: ಕ್ಯಾನ್ಸರ್ ಪೀಡಿತರಿಗೆ ನೆರವಿನ ಕ್ರಿಕೆಟ್ ಪಂದ್ಯಾಟ

Update: 2020-01-26 13:19 GMT

ಮಂಗಳೂರು, ಜ.26: ಕ್ಯಾನ್ಸರ್ ಪೀಡಿತರಿಗೆ ನೆರವಾಗಲು ಫ್ರೆಂಡ್ಸ್ ಬಳ್ಳಾಲ್‌ಬಾಗ್ ಬಿರುವೆರ್ ಕುಡ್ಲವು 'ಫ್ರೆಂಡ್ಸ್ ಬಳ್ಳಾಲ್‌ಬಾಗ್ ಕ್ರಿಕೆಟ್ ಲೀಗ್ ಪಂದ್ಯಾಟ’ವನ್ನು ಬಳ್ಳಾಲ್‌ಬಾಗ್‌ನಲ್ಲಿ ಶನಿವಾರ ಆಯೋಜಿಸಿತ್ತು.

ಶಾಸಕ ಡಾ.ಭರತ್ ಶೆಟ್ಟಿ ಉದ್ಘಾಟಿಸಿ ಮಾತನಾಡಿದರು. ಡಾ.ಶಿವಶರಣ್‌ಶೆಟ್ಟಿ ಸಂಘಟನೆಯ ಸಮಾಜಮುಖಿ ಕೆಲಸಗಳನ್ನು ಶ್ಲಾಘಿಸಿದರು.

ಕಾರ್ಪೊರೇಟರ್ ಮನೋಜ್, ಲೀಲಾವತಿ, ಕಿರಣ್ ಕೋಡಿಕಲ್, ಉದ್ಯಮಿ ದಿನೇಶ್ ಪೈ, ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ್ ಪೂಜಾರಿ, ಅಧ್ಯಕ್ಷ ರಾಕೇಶ್ ಬಳ್ಳಾಲ್‌ಬಾಗ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News