ಬೆಂಗಳೂರು: ಪೊಲೀಸ್ ಮಾಹಿತಿದಾರನ ಕೊಲೆ

Update: 2020-01-26 16:50 GMT

ಬೆಂಗಳೂರು, ಜ.26:ಪೊಲೀಸ್ ಮಾಹಿತಿದಾರನೊರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಕೊಲೆಗೈದಿರುವ ಘಟನೆ ಇಲ್ಲಿನ ಬಸವೇಶ್ವರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

 ಇಲ್ಲಿನ ಕಮಲಾನಗರದಲ್ಲಿ ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಪ್ರಭು (27)ಕೊಲೆಯಾದ ಪೊಲೀಸ್ ಮಾಹಿತಿದಾರ ಎಂದು ತಿಳಿದುಬಂದಿದೆ.

 ಸಿದ್ದೇಶ್ವರ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದ ಪ್ರಭು, ಕಳ್ಳರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತಿದ್ದರು. ಎರಡು ಪ್ರಕರಣಗಳಲ್ಲಿ ಕಳವು ಆರೋಪಿಗಳನ್ನು ಹಿಡಿದುಕೊಟ್ಟಿದ್ದರು. ಹೀಗಾಗಿಯೇ ಹಳೇ ದ್ವೇಷ ಹಿನ್ನಲೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವ ಬಸವೇಶ್ವರ ನಗರ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News