ಕುತ್ಪಾಡಿ ಆಯುರ್ವೇದ ಆಸ್ಪತ್ರೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Update: 2020-01-26 17:32 GMT

ಉಡುಪಿ, ಜ.26: ಉದ್ಯಾವರ ಕುತ್ಪಾಡಿಯ ಶ್ರೀ ಧರ್ಮಸ್ಥಳ ಮಂಜು ನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯದಲ್ಲಿ 71ನೆ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಉಡುಪಿ ಗಾಂಧಿ ಆಸ್ಪತ್ರೆಯ ನಿರ್ದೇಶಕ ಡಾ.ವ್ಯಾಸರಾಜ ತಂತ್ರಿ ಧ್ವಜಾ ರೋಹಣ ನೆರವೇರಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಮಮತಾ ಕೆ.ವಿ. ಶುಭಾಶಂನೆಗೈದರು.

ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ಸುಚೇತ ಕುಮಾರಿ, ಸಹಾಯಕ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ವೀರಕುಮಾರ ಕೆ., ಎನ್ನೆಸೆಸ್ ಘಟಕದ ಸದಸ್ಯರಾದ ಡಾ.ಶರಶ್ಚಂದ್ರ ಆರ್., ಡಾ.ಶ್ರೀನಿಧಿ ಧನ್ಯ, ವಿದ್ಯಾರ್ಥಿ ಸಂಘದ ನಾಯಕ ಕಾರ್ತಿಕ್ ಪ್ರಸಾದ್ ಉಪಸ್ಥಿತರಿದ್ದರು.

ದೈಹಿಕ ಶಿಕ್ಷಕ ಆದರ್ಶ್ ಶೆಟ್ಟಿ ಧ್ವಜವಂದನಾ ಕಾರ್ಯಕ್ರಮ ನಿರ್ವಹಿಸಿದರು. ನೇಹಾ ಪಾಟೀಲ್ ಸ್ವಾಗತಿಸಿ, ಚಂದನಾ ಲಕ್ಷ್ಮೀ ವಂದಿಸಿ, ಕಾರ್ತಿಕ್ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News