​‘ಪೌರತ್ವ ಕಾಯ್ದೆ’ ಅರಿಯಲು ಸಮಾವೇಶ: ಶಾಸಕ ಕಾಮತ್

Update: 2020-01-26 18:26 GMT

ಮಂಗಳೂರ, ಜ.26: ನಗರದ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಜ.27ರಂದು ನಡೆಯುವ ಪೌರತ್ವ ತಿದ್ದುಪಡಿ ಕಾಯ್ದೆಯ ಜನ ಜಾಗೃತಿ ಸಮಾವೇಶ ನಡೆಯಲಿದೆ. ಕಾಯ್ದೆಯ ಬಗ್ಗೆ ಅರಿಯಲು ಮಂಗಳೂರಿನ ಪ್ರತಿಯೊಬ್ಬರೂ ಸಮಾವೇಶಕ್ಕೆ ಆಗಮಿಸಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.

ನಗರದ ಅಶೋಕನಗರದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನಡೆಸಿ ಮಾಹಿತಿ ಕಾರ್ಯಾಗಾರ ನಡೆಸಿ ಅವರು ಮಾತನಾಡಿದರು.
ಪೌರತ್ವ ತಿದ್ದುಪಡಿ ಕಾಯ್ದೆಯ ಸಮಗ್ರ ಮಾಹಿತಿ ನೀಡಲು ಕೇಂದ್ರದ ಗೃಹ ಸಚಿವ ರಾಜನಾಥ್ ಸಿಂಗ್ ಆಗಮಿಸಲಿದ್ದಾರೆ. ಕೇಂದ್ರ ಸರಕಾರವು ಪ್ರತಿಯೊಬ್ಬ ಭಾರತೀಯನ ಹಕ್ಕನ್ನು ಗೌರವಿಸುತ್ತದೆ. ಆದರೆ ಕೇಂದ್ರ ಸರಕಾರವನ್ನು ಜನರ ಮುಂದೆ ಖಳನಾಯಕನಂತೆ ಬಿಂಬಿಸಲು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಅರಾಜಕತೆ ಸೃಷ್ಟಿಸುತ್ತಿವೆ ಎಂದು ಆರೋಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News