ಮೈಸೂರು: ವೃದ್ಧನ ಬರ್ಬರ ಹತ್ಯೆ

Update: 2020-01-27 15:36 GMT

ಮೈಸೂರು,ಜ.27: ದುಷ್ಕರ್ಮಿಗಳು ವೃದ್ಧರೊಬ್ಬರ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿ ಅರಸು ಬಡಾವಣೆಯಲ್ಲಿ ನಡೆದಿದೆ.

ಮೃತ ವೃದ್ಧನನ್ನು ನಂಜನಗೂಡು ಎನ್.ಜಿ.ಓ ಕಾಲೋನಿ ನಿವಾಸಿ ಬಸವರಾಜು ಎಂದು ಗುರುತಿಸಲಾಗಿದೆ. ರವಿವಾರ ರಾತ್ರಿ ಮನೆಯಿಂದ ಹೊರಗಡೆ ಬಂದ ವೇಳೆ ದುಷ್ಕರ್ಮಿಗಳು ಬಸವರಾಜು ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಈ ಸಂಬಂಧ ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರ ಪ್ರಕರಣ ದಾಖಲು ಮಾಡಿಕೊಂಡಿದ್ದು ತನಿಖೆ ನಡೆಸುತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News