ವಿಷಪ್ರಾಸನ: 7 ಬೀದಿ ನಾಯಿಗಳು ಸಾವು

Update: 2020-01-27 15:40 GMT

ಬೆಂಗಳೂರು, ಜ.27: ವಿಷಪ್ರಾಸನದಿಂದ ಏಳು ಬೀದಿ ನಾಯಿಗಳು ಸಾವನ್ನಪ್ಪಿದ್ದು, ನಾಲ್ಕು ನಾಯಿಗಳು ಗಂಭೀರ ಪರಿಸ್ಥಿತಿಯಲ್ಲಿರುವ ಪ್ರಕರಣ ಇಲ್ಲಿನ ಜೆಪಿ ನಗರದ ಎಂಎಸ್ ರಾಮಯ್ಯ ಸಿಟಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ.

ವಿಷಾಹಾರ ಹಾಕಿರುವ ದುಷ್ಕರ್ಮಿಗಳ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಷ್ಕರ್ಮಿಗಳು ಹಾಕಿದ ಆಹಾರ ತಿಂದು ಏಳು ನಾಯಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ ಎನ್ನಲಾಗಿದೆ.

ಸೋಮವಾರ ಬೆಳಗ್ಗೆ ಈ ಪ್ರಕರಣ ಬೆಳಕಿಗೆ ಬಂದಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ. ನಾಯಿಗಳಿಗೆ ವಿಷ ಹಾಕುವುದು ಅಪರಾಧ, ಒಂದು ವಿಷ ಹಾಕಿರುವುದು ಕಂಡು ಬಂದರೆ ತಪ್ಪಿತಸ್ಥರ ವಿರುದ್ಧ ಪೊಲೀಸರಿಗೆ ದೂರು ನೀಡಿ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News