ಸಿಎಎ ಪರ ಜಾಗೃತಿ ಸಮಾವೇಶ: ದ.ಕ. ಜಿಲ್ಲೆಯ ವಿವಿಧೆಡೆ ಭಾಗಶಃ ಬಂದ್

Update: 2020-01-27 16:08 GMT

ಮಂಗಳೂರು, ಜ.27: ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಅರಿವು ಮೂಡಿಸುವುದಕ್ಕಾಗಿ ದ.ಕ. ಜಿಲ್ಲಾ ಬಿಜೆಪಿ ವತಿಯಿಂದ ಕೂಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಸೋಮವಾರ ಅಪರಾಹ್ನ ಆಯೋಜಿಸಿರುವ ಜನಜಾಗೃತಿ ಸಮಾವೇಶಕ್ಕೆ ಬೆಂಬಲ ವ್ಯಕ್ತಪಡಿಸಿ ದ.ಕ.ಜಿಲ್ಲೆಯ ವಿವಿಧೆಡೆ ಭಾಗಶಃ ಬಂದ್ ಆಗಿತ್ತು.

ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಲುವಾಗಿ ವಿವಿಧೆಡೆ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ನಗರ ಮತ್ತು ಗ್ರಾಮಾಂತರ ಪ್ರದೇಶದ ಹಲವು ರೂಟ್‌ಗಳಲ್ಲಿ ಖಾಸಗಿ ಸಿಟಿ-ಸರ್ವಿಸ್ ಬಸ್‌ಗಳ ಓಡಾಟವೂ ಸ್ಥಗಿತಗೊಂಡಿತ್ತು.

ಈ ಮಧ್ಯೆ ಸಮಾವೇಶಕ್ಕೆ ಬೆಂಬಲ ಸೂಚಿಸಿ ನಗರದ ಸರ್ವಿಸ್ ಬಸ್ ನಿಲ್ದಾಣ ಬಳಿಯ ಮೀನು ಮಾರುಕಟ್ಟೆಯಲ್ಲಿ ಬೆಳಗ್ಗೆ ಯಿಂದಲೇ ವ್ಯವಹಾರ ಸ್ಥಗಿತಗೊಳಿಸಲಾಗಿತ್ತು. ಇದರಿಂದ ಸದಾ ಜನರಿಂದ ಗಿಜಿಗುಡುತ್ತಿರುವ ಮೀನು ಮಾರುಕಟ್ಟೆ ಬಿಕೋ ಎನ್ನುತ್ತಿತ್ತು.

ಸಮಾವೇಶಕ್ಕೆ ಬೆಂಬಲ ಸೂಚಿಸಿ ಮುಚ್ಚಲ್ಪಟ್ಟ ಅಂಗಡಿ ಮುಂಗಟ್ಟುಗಳ ಬಗ್ಗೆಯೂ ಸಾಮಾಜಿಕ ಜಾಲತಾಣದಲ್ಲಿ ಪರ-ವಿರೋಧ ಹೇಳಿಕೆಗಳು ವೈರಲ್ ಆಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News