ಸೇತುವೆಯಿಂದ ನದಿಗೆ ಹಾರಿದ ಉದ್ಯಮಿಯ ಮೃತದೇಹ ಪತ್ತೆ

Update: 2020-01-27 16:13 GMT

ಕುಂದಾಪುರ, ಜ.27: ಕುಂದಾಪುರ ಸಂಗಮ್ ಹೇರಿಕುದ್ರು ಸೇತುವೆಯಿಂದ ಜ.26ರಂದು ಸಂಜೆ ವೇಳೆ ಹಾಲಾಡಿ ನದಿಗೆ ಹಾರಿ ನಾಪತ್ತೆಯಾಗಿದ್ದ ಉದ್ಯಮಿ, ಕುಂದಾಪುರ ಚಿಕನ್‌ಸಾಲ್ ರಸ್ತೆಯ ನಿವಾಸಿ ಕೆ.ಜಿ.ಗಣೇಶ್(50) ಎಂಬವರ ಮೃತದೇಹ ಇಂದು ಬೆಳಗ್ಗೆ 7:45ರ ಸುಮಾರಿಗೆ ಹೆಮ್ಮಾಡಿ ಸಂತೋಷ ನಗರದ ಚಕ್ರಾ ನದಿಯಲ್ಲಿ ಪತ್ತೆಯಾಗಿದೆ.

ಕಳೆದ 25ವರ್ಷಗಳ ಕಾಲ ಮುಂಬೈಯಲ್ಲಿ ಹೊಟೇಲ್ ನಡೆಸುತ್ತಿದ್ದ ಇವರು, ನಾಲ್ಕೈದು ವರ್ಷಗಳ ಹಿಂದೆ ಹೊಟೇಲನ್ನು ಲೀಸ್‌ಗೆ ನೀಡಿ, ಊರಿಗೆ ಬಂದು ನೆಲೆಸಿದ್ದರು. ಸುಮಾರು 2 ವರ್ಷಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಿನ್ನೆ ಸಂಜೆಯಿಂದ ಇವರಿಗಾಗಿ ಅಗ್ನಿಶಾಮಕದಳ ಹಾಗೂ ಸ್ಥಳೀಯರು ತೀವ್ರ ಹುಡುಕಾಟ ನಡೆಸಿದ್ದರು. ಇವರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News