ಕಾಸರಗೋಡು : ಮದ್ರಸ ವಿದ್ಯಾರ್ಥಿಗಳಿಗೆ ತಂಡದಿಂದ ಹಲ್ಲೆ

Update: 2020-01-28 07:16 GMT

ಕಾಸರಗೋಡು : ಮದ್ರಸ ವಿದ್ಯಾರ್ಥಿಗಳಿಬ್ಬರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ರಾತ್ರಿ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದೆ.

ಹಸನ್ ಸಯೀದ್ (13) ಮತ್ತು ಮುನಾಸ್ (17) ಹಲ್ಲೆಗೆ ಒಳಗಾದ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದ್ದು, ಅವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮದ್ರಸದಲ್ಲಿ ವಾಸ್ತವ್ಯ ನಡೆಸಿ ಕಲಿಯುತ್ತಿದ್ದ ವಿದ್ಯಾರ್ಥಿಗಳು ರಾತ್ರಿ ಊಟಕ್ಕೆಂದು ಸಮೀಪದ ಮನೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಬಂದ ತಂಡವು ಹಲ್ಲೆ ನಡೆಸಿದೆ. ಕೃತ್ಯದ ಹಿಂದೆ ಸಂಘ ಪರಿವಾರದ ಕೈವಾಡ ಇದೆ ಎಂದು ಆರೋಪ ಕೇಳಿ ಬರುತ್ತಿದೆ. ಕಾರನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಹೆಚ್ಚಿನ ತನಿಖೆ ನಡೆಯುತ್ತಿದೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News