ಬೀದರ್: ಶಾಲಾ ವಾರ್ಷಿಕೋತ್ಸವದಲ್ಲಿ ಸಿಎಎ ವಿರೋಧಿ ನಾಟಕ: ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲು
Update: 2020-01-28 16:41 GMT
ಬೀದರ್: ನಗರದ ಪ್ರತಿಷ್ಠಿತ ಶಾಲೆಯೊಂದರ ವಾರ್ಷಿಕೋತ್ಸವ ಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ಎನ್ಆರ್ಸಿ ವಿರೋಧಿಸಿ ವಿದ್ಯಾರ್ಥಿಗಳು ನಾಟಕ ಪ್ರದರ್ಶನ ಮಾಡಿದ್ದು, ಈ ಹಿನ್ನೆಲೆ ಶಾಲಾ ಆಡಳಿತ ಮಂಡಳಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇತ್ತೀಚಿಗಷ್ಟೇ ಕಾಲೇಜು ವಾರ್ಷಿಕೋತ್ಸವದಲ್ಲಿ ವಿದ್ಯಾರ್ಥಿಗಳು ನಾಟಕ ಪ್ರದರ್ಶಿಸಿದ್ದು, ನಾಟಕದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ನೀಲೇಶ್ ಎಂಬವರು ಶಾಲಾ ಆಡಳಿತ ಮಂಡಳಿ ವಿರುದ್ಧ ಬೀದರ್ ಪೊಲೀಸರಿಗೆ ದೂರು ನೀಡಿದ್ದರು.
ನಾಟಕದಿಂದ ಸಮಾಜ ಶಾಂತಿಗೆ ದಕ್ಕೆಯಾಗುತ್ತದೆ ಹಾಗೂ ಸರ್ಕಾರದ ನೀತಿ ಹಾಗೂ ನಿರ್ಧಾರಗಳ ವಿರುದ್ಧ ತಪ್ಪು ಸಂದೇಶವನ್ನು ರವಾನಿಸದಂತಾಗುತ್ತದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.