ನಿರ್ಭಯಾ ಅತ್ಯಾಚಾರ ಪ್ರಕರಣ: ಮುಖೇಶ್ ಸಿಂಗ್ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Update: 2020-01-29 05:53 GMT

ಹೊಸದಿಲ್ಲಿ, ಜ.29:  ನಿರ್ಭಯಾ  ಅತ್ಯಾಚಾರ ಪ್ರಕರಣದ ಅಪರಾಧಿ ಮುಖೇಶ್ ಸಿಂಗ್ ಸಲ್ಲಿಸಿದ್ದ  ಪರಿಹಾರಾತ್ಮಕ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಆರ್ ಭಾನುಮತಿ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಅಪರಾಧಿ ಮುಖೇಶ್ ಕುಮಾರ್ ಸಿಂಗ್   ಸಲ್ಲಿಸಿದ್ದ  ಅರ್ಜಿಗೆ  ಸಂಬಂಧಿಸಿದಂತೆ ಬುಧವಾರ ತೀರ್ಪು ಪ್ರಕಟಿಸಿದೆ. 

ರಾಷ್ಟ್ರಪತಿಗಳು ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮುಖೇಶ್ ಅರ್ಜಿ ಸಲ್ಲಿಸಿದ್ದನು." ರಾಷ್ಟ್ರಪತಿಗಳು ಆತುರದಲ್ಲಿ ನಿರ್ಧಾರ  ಕೈಗೊಂಡಿಲ್ಲ. ಪ್ರಕರಣದಲ್ಲಿ ಕೋರ್ಟ್ ಮಧ್ಯಪ್ರವೇಶ ಅಗತ್ಯವಿಲ್ಲ. ಅಪರಾಧಿಯ ಅರ್ಜಿಯಲ್ಲ  ಹುರುಳಿಲ್ಲ "ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಈ ಹಿಂದೆ ನಾಲ್ವರು ಅಪರಾಧಿಗಳಾದ ಅಕ್ಷಯ್ ಮತ್ತು ಮುಖೇಶ್ ಸಿಂಗ್ , ವಿನಯ್ ಶರ್ಮಾ (26) ಮತ್ತು ಪವನ್ ಗುಪ್ತಾ (26) ದಿಲ್ಲಿಯ  ತಿಹಾರ್ ಜೈಲಿನಲ್ಲಿ ಫೆ.1ರಂದು ಬೆಳಗ್ಗೆ 6 ಗಂಟೆಗೆ  ಗಲ್ಲಿಗೇರಿಸುವ ಬಗ್ಗೆ ಸಮಯ ನಿಗದಿಯಾಗಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News