ಕೈಗಾರಿಕಾ ಸ್ಪಂದನಾ ಕಾರ್ಯಕ್ರಮ

Update: 2020-01-29 15:25 GMT

ಉಡುಪಿ, ಜ.29: ಕೈಗಾರಿಕಾ ಸ್ಪಂದನಾ ಕಾರ್ಯಕ್ರಮವನ್ನು ಫೆ.5ರ ಬುಧವಾರ ಬೆಳಗ್ಗೆ 11:15ಕ್ಕೆ ಮಣಿಪಾಲ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜಿ.ಜಗದೀಶ್ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯಲ್ಲಿರುವ ಕೈಗಾರಿಕೋದ್ಯಮಿಗಳಿಗೆ ಸಮಸ್ಯೆ / ಕುಂದುಕೊರತೆಗಳಿದ್ದಲ್ಲಿ ಫೆ.3ರೊಳಗೆ ಲಿಖಿತ ರೂಪದಲ್ಲಿ ಅರ್ಜಿಯನ್ನು ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬೇಕು.

ಹೆಚ್ಚಿನ ವಿವರಗಳಿಗೆ ಕಚೇರಿಯ ದೂರವಾಣಿ ಸಂಖ್ಯೆ: 0820-2575650ನ್ನು ಸಂಪರ್ಕಿಸುವಂತೆ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News