ಆರ್ಥಿಕತೆಗೆ ಮುಂದೇನು ಮಾಡಬೇಕೆಂಬ ಸಣ್ಣ ಕಲ್ಪನೆಯೂ ಪ್ರಧಾನಿಗೆ ಇಲ್ಲ: ರಾಹುಲ್ ಗಾಂಧಿ

Update: 2020-01-29 15:50 GMT

ಹೊಸದಿಲ್ಲಿ, ಜ. 29: ದೇಶದ ಆರ್ಥಿಕ ಸ್ಥಿತಿ ಬಗ್ಗೆ ಬುಧವಾರ ಸರಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಂದೇನು ಮಾಡಬೇಕು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರಿಗೆ ಯಾವುದೇ ಕಲ್ಪನೆ ಇಲ್ಲ ಎಂದು ಬುಧವಾರ ಹೇಳಿದ್ದಾರೆ.

 ಬಜೆಟ್ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ರಾಹುಲ್ ಗಾಂಧಿ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಹಣಕಾಸು ಸಚಿವ ಸೀತಾರಾಮನ್ 2020-21 ವಿತ್ತ ವರ್ಷದ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲಿದ್ದಾರೆ. ನರೇಂದ್ರ ಮೋದಿ ಹಾಗೂ ಅವರ ಆರ್ಥಿಕ ಸಲಹೆಗಾರರ ತಂಡ ಆರ್ಥಿಕತೆಯನ್ನು ತಿರುವು ಮುರುವಾಗಿಸಿದ್ದಾರೆ. ಈ ಹಿಂದೆ ಜಿಡಿಪಿ ಶೇ. 7.5, ಹಣದುಬ್ಬರ ಶೇ. 3.5 ಇತ್ತು. ಈಗ ಜಿಡಿಪಿ ಶೇ. 3.5 ಹಾಗೂ ಹಣದುಬ್ಬರ ಶೇ. 7.5 ಆಗಿದೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮುಂದೇನು ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ತಿಳಿದಿಲ್ಲ ಎಂದು ಅವರು ‘ಬಜೆಟ್ 2020’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News