ಬೈಂದೂರು ಇಓಗೆ ಬೆದರಿಕೆ: ದೂರು

Update: 2020-01-29 16:58 GMT

ಬೈಂದೂರು, ಜ.29: ಬೈಂದೂರು ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಣಾಧಿಕಾರಿ ಎನ್.ಭಾರತಿ(50) ಎಂಬವರ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆಯೊಡ್ಡಿರುವ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜ.27ರಂದು ಅಪರಾಹ್ನ ವೇಳೆ ಎನ್.ಭಾರತಿಗೆ ಯಡ್ತರೆ ಗ್ರಾಪಂ ಬಿಲ್ ಕಲೆಕ್ಟರ್ ನಂದಯ್ಯ ಪೂಜಾರಿ ಎಂಬಾತ ಕರ್ತವ್ಯಕ್ಕೆ ಅಡ್ಡಿಪಡಿಸಿ ಬೆದರಿಕೆ ಹಾಕಿ ಅವಮಾನಿಸಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News