ರೌಡಿ ಕೊಲೆ ಪ್ರಕರಣ: 9 ಆರೋಪಿಗಳ ಸೆರೆ
Update: 2020-01-29 18:20 GMT
ಬೆಂಗಳೂರು, ಜ.29: ರೌಡಿ ಲೋಕೇಶ್ ಕೊಲೆ ಪ್ರಕರಣ ಸಂಬಂಧ 9 ಮಂದಿ ಆರೋಪಿಗಳನ್ನು ಇಲ್ಲಿನ ಚಾಮರಾಜಪೇಟೆ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆದರ್ಶನಗರದ ಹೇಮಂತ್, ಸಾಗರ, ಪ್ರವೀಣ್, ಸಂದೇಶ್, ತೇಜಸ್, ಉದಯ, ಯಶ್ವಂತ್ ಸೇರಿದಂತೆ ಒಂಭತ್ತು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದು ಅದರಲ್ಲಿ ಹೇಮಂತ ಎಂಬಾತನ ವಿರುದ್ಧ ಅವಾಚ್ಯವಾಗಿ ನಿಂದಿಸುವ ಪೋಸ್ಟ್ಗಳನ್ನು ಹಾಕಿದ್ದ. ಈ ದ್ವೇಷದ ಹಿನ್ನೆಲೆಯಲ್ಲಿ ಗುಂಪು ಕಟ್ಟಿಕೊಂಡು ಹೇಮಂತ್, ಕೆಂಗೇರಿಯ ರೌಡಿ ಲೋಕೇಶ್ ಅನ್ನು ಕೊಲೆ ಮಾಡಿರುವುದು ತನಿಖೆಯಲ್ಲಿ ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.