ಅವರೇನು ಚೀಫ್ ಮಿನಿಸ್ಟರಾ..?: ಶಾಸಕ ಸುಧಾಕರ್ ವಿರುದ್ಧ ಎಚ್.ವಿಶ್ವನಾಥ್ ಕಿಡಿ

Update: 2020-01-30 15:58 GMT

ಮೈಸೂರು,ಜ.30: ಸೋತ ಲಕ್ಷ್ಮಣ ಸವದಿಗೆ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಇನ್ನು ನಾವು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪೇನಿದೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿ ಸ್ಥಾನ ಇಲ್ಲ ಎಂದು ಬಿಜೆಪಿ ವಲಯಲ್ಲಿ ಮಾತು ಕೇಳಿ ಬಂದಿರುವ ಹಿನ್ನೆಲೆ ವಿಶ್ವನಾಥ್ ಇಂದು ಮಾಧ್ಯಮದ ಎದುರು ಅಸಮಾಧಾನ ವ್ಯಕ್ತಪಡಿಸಿದರು. 'ನನ್ನ ಗುರಿ ಇದ್ದದ್ದು ಸಮ್ಮಿಶ್ರ ಸರ್ಕಾರ ಪತನ. ನಾನು ತಪ್ಪು ಮಾಡಿದ್ದೇನೆ ಅನ್ನಿಸಿಲ್ಲ. ಮಂತ್ರಿಗಿರಿ ಸಿಗಲಿ ಬಿಡಲಿ, ನಾನು ನಾನೇ. ರಾಜಕೀಯ ಕೊನೆಗಾಲದಲ್ಲಿ ನನಗೆ ಖಂಡಿತ ಸೋಲಾಗಲ್ಲ. ಸಿಎಂ ಯಡಿಯೂರಪ್ಪರನ್ನು ನಂಬಿದ್ದೇನೆ. ಮಂತ್ರಿ ಸ್ಥಾನ ವಿಚಾರವನ್ನ ಬಿಎಸ್ ವೈ ಬಳಿ ಚರ್ಚಿಸಲ್ಲ ಎಂದು ಹೇಳಿದರು.

ಶಾಸಕ ಸುಧಾಕರ್ ವಿರುದ್ಧ ಗರಂ ಆದ ವಿಶ್ವನಾಥ್, ಅವರು ಉಪಚುನಾವಣೆಗೆ ನಿಲ್ಲಬಾರದಿತ್ತು ಎಂದಿದ್ದಾರೆ. ಹಾಗೆ ಹೇಳಲು ಅವರೇನು ಚೀಫ್ ಮಿನಿಸ್ಟರಾ..? ನಮ್ಮ ಗುಂಪಿನಲ್ಲಿ ಯಾರೂ ಈ ರೀತಿ ಹೇಳಿಲ್ಲ. ರಮೇಶ್ ಜಾರಕಿಹೊಳಿ ಸರಿಯಾಗಿ ಮಾತನಾಡಿದ್ದಾರೆ ಎಂದು ಶಾಸಕ ಸುಧಾಕರ್ ವಿರುದ್ಧ ಕಿಡಿಕಾರಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News