ಕುಡಿದು ಬಂದು ಕಿರುಕುಳ ನೀಡುತ್ತಿದ್ದ ಆರೋಪ: ತಂದೆಯನ್ನೇ ಕೊಲೆಗೈದ ಪುತ್ರ

Update: 2020-02-02 13:04 GMT

ಬೆಂಗಳೂರು, ಫೆ.2: ಮದ್ಯದ ಅಮಲಿನಲ್ಲಿ ಕಿರುಕುಳ ನೀಡುತ್ತಿದ್ದ ಎಂಬ ಕಾರಣಕ್ಕೆ ತಂದೆಯ ಮೇಲೆ ಮಗ ದಾಳಿ ನಡೆಸಿ, ಕೊಲೆ ಮಾಡಿರುವ ಘಟನೆ ಇಲ್ಲಿನ ಸೋಲದೇವನಹಳ್ಳಿಯ ಗುಟ್ಟೆ ಬಸವೇಶ್ವರ ನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಸಿಂಡಿಕೇಟ್‌ ಬ್ಯಾಂಕಿನಲ್ಲಿ ಉದ್ಯೋಗಿಯಾಗಿದ್ದ ದೊಡ್ಡಚೌಡಪ್ಪ (50) ಕೊಲೆಯಾದ ವ್ಯಕ್ತಿ. ಕೃತ್ಯವೆಸಗಿದ ಅವರ ಪುತ್ರ ಗಗನ್ (19) ಅನ್ನು ಇಲ್ಲಿನ ಸೋಲದೇವನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಗುಟ್ಟೆಬಸವೇಶ್ವರ ನಗರದಲ್ಲಿ ವಾಸವಾಗಿದ್ದ ದೊಡ್ಡಚೌಡಪ್ಪ, ಹಲವು ವರ್ಷಗಳಿಂದ ಮದ್ಯ ಸೇವನೆ ಮಾಡುತ್ತಿದ್ದ. ದಿನನಿತ್ಯ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಸುತ್ತಿದ್ದ ಎಂದು ಹೇಳಲಾಗುತ್ತಿದೆ. ಇದರಿಂದ ಬೇಸತ್ತ ಪುತ್ರ ಗಗನ್, ತಂದೆ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಸೋಲದೇವನಹಳ್ಳಿ ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News