ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥ: ಸಂಸದ ಡಿ.ಕೆ.ಸುರೇಶ್

Update: 2020-02-02 14:50 GMT

ಬೆಂಗಳೂರು, ಫೆ.2: ಸ್ವಾತಂತ್ರ್ಯ ಹೋರಾಟಗಾರರ ಕುರಿತು ಅರಿವು ಇಲ್ಲದೆ ಮಾತನಾಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆಗೆ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ತಪಾಸಣೆಗೊಳಪಡಿಸಬೇಕು ಎಂದು ಸಂಸದ ಡಿ.ಕೆ.ಸುರೇಶ್ ಕುಮಾರ್ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತಕುಮಾರ್ ಹೆಗಡೆ ಮಾನಸಿಕ ಅಸ್ವಸ್ಥರಾಗಿದ್ದು, ಅವರಿಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುವುದು ಉತ್ತಮ. ಅಷ್ಟೇ ಅಲ್ಲದೆ, ಅನಂತಕುಮಾರ್ ಹೆಗಡೆ ಯಾರಿಗೂ ಬೇಡವಾದ ವಸ್ತು. ಅವರು ಬಿಜೆಪಿಯವರಿಗೂ ಬೇಡವಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸ್ವಾತಂತ್ರ್ಯ ಹೋರಾಟಗಾರರು ಇಲ್ಲದೆ ಹೋಗಿದ್ದರೆ ಹೆಗಡೆಗೂ ಮಾತನಾಡುವ ಅವಕಾಶವೇ ಇರುತ್ತಿರಲಿಲ್ಲ. ಬ್ರಿಟಿಷರ ಆಳ್ವಿಕೆ ಅಥವಾ ಹಿಟ್ಲರ್ ಮಾದರಿ ಆಡಳಿತ ಇದ್ದಿದ್ದರೆ, ಆತನಿಗೂ ತನ್ನ ಅಭಿಪ್ರಾಯ ವ್ಯಕ್ತಪಡಿಸುವ ವಾಕ್ ಸ್ವಾತಂತ್ರ್ಯ ಇರುತ್ತಿರಲಿಲ್ಲ. ಅವರು ಇಷ್ಟೊಂದು ಧೈರ್ಯವಾಗಿ ಮಾತನಾಡಲು ಸ್ವಾತಂತ್ರ್ಯ ಹೋರಾಟಗಾರರೇ ಕಾರಣ ಎಂದು ಸುರೇಶ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News