ಫೆ.6ರ ನಂತರ ಬಿಜೆಪಿಯ ಸ್ಥಿತಿ ಬಯಲಿಗೆ: ಎಸ್.ಆರ್.ಪಾಟೀಲ್

Update: 2020-02-03 11:59 GMT

ಹುಬ್ಬಳ್ಳಿ, ಫೆ.3: ಬಿಜೆಪಿ ಸರಕಾರದ ಸಚಿವ ಸಂಪುಟ ವಿಸ್ತರಣೆಯಾದ ನಂತರ ಬಿಜೆಪಿಯ ನಿಜವಾದ ಸ್ಥಿತಿ ಬಯಲಿಗೆ ಬರಲಿದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರದ ಸಚಿವ ಸಂಪುಟ ಫೆ.6ಕ್ಕೆ ವಿಸ್ತರಣೆಯಾಗಲಿದೆ. ಆ ನಂತರ ರಾಜ್ಯದ ರಾಜಕಾರಣದ ಬೆಳವಣಿಗೆ ಯಾವ, ಯಾವ ದಿಕ್ಕಿಗೆ ತಿರುಗಲಿದೆ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.

ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಸಾಕಷ್ಟು ಗೊಂದಲ, ಸಮಸ್ಯೆ ಉಂಟಾಗಲಿದೆ ಎಂಬುದನ್ನು ನಾನು ಮೊದಲೇ ಹೇಳಿದ್ದೆ. ಆದರೂ ಬಿಜೆಪಿ ನಾಯಕರಿಗೆ ಒಳ್ಳೆಯದಾಗಲಿ. ಶುಭವೋ, ಅಶುಭವೋ ಅನ್ನೋದು ಮುಂದೆ ತಿಳಿಯಲಿದೆ ಎಂದು ಅವರು ಹೇಳಿದರು.

ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಚೆಂಡು ಹೈಕಮಾಂಡ್ ಅಂಗಳದಲ್ಲಿದೆ. ಸೋನಿಯಾ ಗಾಂಧಿಯವರು ಅಧ್ಯಕ್ಷರ ಆಯ್ಕೆಯ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ಚರ್ಚೆ ಅಗತ್ಯವಿಲ್ಲ.

-ಎಸ್.ಆರ್.ಪಾಟೀಲ್, ವಿಪಕ್ಷ ನಾಯಕ, ವಿಧಾನ ಪರಿಷತ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News