ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2020-02-04 15:49 GMT

ಗಂಗೊಳ್ಳಿ, ಫೆ.4: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಹಕ್ಲಾಡಿ ಗ್ರಾಮದ ಯಳೂರು ನಿವಾಸಿ ಶಾಂತರಾಮ ಶೆಟ್ಟಿ ಎಂಬವರ ಪತ್ನಿ ಸುಜಾತಾ ಶೆಟ್ಟಿ(48) ಜೀವನದಲ್ಲಿ ಜಿಗುಪ್ಸೆಗೊಂಡು ಫೆ.3ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿರಿಯಡ್ಕ: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಬೈರಂಪಳ್ಳಿ ಗ್ರಾಮದ ಸಾಂತ್ಯಾರು ನಡುಬೆಟ್ಟುವಿನ ಸಂಜೀವ ಮೂಲ್ಯ(60) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಫೆ.4ರಂದು ನಸುಕಿನ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News