×
Ad

​ಬೈಕ್ ಢಿಕ್ಕಿ: ಸ್ಕೂಟಿ ಸವಾರ ಮೃತ್ಯು

Update: 2020-02-04 21:22 IST

ಕೋಟ, ಫೆ.4: ಹಾರ್ದಳ್ಳಿ ಮಂಡಳ್ಳಿ ಗ್ರಾಮದ ಬಿದ್ಕಲ್ಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪ ಫೆ.4ರಂದು ಮಧ್ಯಾಹ್ನ ಬೈಕ್ ಮತ್ತು ಸ್ಕೂಟಿ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟಿ ಸವಾರ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಸ್ಕೂಟಿ ಸವಾರ ಸುರೇಶ್ ಎಂದು ಗುರುತಿಸಲಾಗಿದೆ. ಬೈಕ್ ಸವಾರ ಗುರುರಾಜ್ ಹಾಗೂ ಸಹಸವಾರ ಸಂದೇಶ್ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಿದ್ಕಲ್ಕಟ್ಟೆಯಿಂದ ಕೋಟೇಶ್ವರ ಕಡೆಗೆ ಹೋಗುತ್ತಿದ್ದ ಸ್ಕೂಟಿಗೆ ಕೋಟೇಶ್ವರ ಕಡೆಯಿಂದ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸುರೇಶ್ ಮಣಿಪಾಲ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು.

ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News