ನಿತ್ಯಾನಂದನಿಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಹೈಕೋರ್ಟ್

Update: 2020-02-05 09:49 GMT

ಬೆಂಗಳೂರು, ಫೆ.5: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ. ರಾಮನಗರ ಕೋರ್ಟ್ ಗೆ ವಶಕ್ಕೆ ತೆಗೆದುಕೊಳ್ಳಲು ‌ನಿರ್ದೇಶಿಸಿದೆ.

ಜಾಮೀನು ರದ್ದು ಕೋರಿ ದೂರುದಾರ ಲೆನಿನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠದಲ್ಲಿ ನಡೆಯಿತು.    

ಅತ್ಯಾಚಾರ ಆರೋಪ ಪ್ರಕರಣದಲ್ಲಿ ನಿತ್ಯಾನಂದ ಸ್ವಾಮಿಗೆ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು. ಆದರೆ, ಜಾಮೀನು ಷರತ್ತು ಉಲ್ಲಂಘಿಸಿರುವ ಅವರು, ಕೋರ್ಟ್ ವಿಚಾರಣೆಗೆ ಹಾಜರಾಗುತ್ತಿಲ್ಲ. ಅವಧಿ ಮುಗಿದಿರುವ ಪಾಸ್ಪೋರ್ಟ್ ಅಡಿ ದೇಶ ತೊರೆದಿದ್ದಾರೆ. ಆದರೆ ಭಾರತದಲ್ಲಿರುವಂತೆ ವಿನಾಯಿತಿಗೆ ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ, ಜಾಮೀನು ರದ್ದುಪಡಿಸಬೇಕು ಎಂದು ಅರ್ಜಿ ಸಲ್ಲಿಕೆಯಾಗಿತ್ತು.

ನ್ಯಾಯಪೀಠವು ವಕೀಲರ ವಾದವನ್ನು ಆಲಿಸಿ ನಿತ್ಯಾನಂದನಿಗೆ ನೀಡಿದ್ದ ಜಾಮೀನನ್ನು ರದ್ದುಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News